ರಾಜ್ಯ

ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದು: ಶ್ರೀರಾಮುಲು ಕಿಡಿ

ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಸಿದ್ದರಾಮಯ್ಯ ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡಿ ದೊಡ್ಡ ದೊಡ್ಡ ಸಮಾವೇಶ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಹಾಗೂ ಸಚಿವರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವುಗಳಾದರೂ ಬರುವಷ್ಟು ಸಮಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಮುಡಾದಲ್ಲಿ ಸುಮಾರು 700 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಡಿ ಹಾಗೂ ಸಿಬಿಐ ಭೀತಿ ಶುರುವಾಗಿದೆ. ಅದಕ್ಕೆ ಸಿದ್ದರಾಮಯ್ಯರು ಶಕ್ತಿ ಪ್ರದರ್ಶನ ಮತ್ತು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಈ ಸಮಾವೇಶದ ಮೂಲಕ ಇಡಿ ಅಥವಾ ಸಿಬಿಐ ಅಧಿಕಾರಿಗಳಿಗೆ ನನ್ನ ಹಿಂದೆ ಇಷ್ಟೊಂದು ಜನಶಕ್ತಿಯ ಬೆಂಬಲವಿದೆ ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

6 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

19 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

20 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago