ರಾಜ್ಯ

ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದು: ಶ್ರೀರಾಮುಲು ಕಿಡಿ

ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ರಾಜ್ಯದ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಸಿದ್ದರಾಮಯ್ಯ ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡಿ ದೊಡ್ಡ ದೊಡ್ಡ ಸಮಾವೇಶ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಹಾಗೂ ಸಚಿವರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವುಗಳಾದರೂ ಬರುವಷ್ಟು ಸಮಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಮುಡಾದಲ್ಲಿ ಸುಮಾರು 700 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಡಿ ಹಾಗೂ ಸಿಬಿಐ ಭೀತಿ ಶುರುವಾಗಿದೆ. ಅದಕ್ಕೆ ಸಿದ್ದರಾಮಯ್ಯರು ಶಕ್ತಿ ಪ್ರದರ್ಶನ ಮತ್ತು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಈ ಸಮಾವೇಶದ ಮೂಲಕ ಇಡಿ ಅಥವಾ ಸಿಬಿಐ ಅಧಿಕಾರಿಗಳಿಗೆ ನನ್ನ ಹಿಂದೆ ಇಷ್ಟೊಂದು ಜನಶಕ್ತಿಯ ಬೆಂಬಲವಿದೆ ತೋರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

27 mins ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

48 mins ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

1 hour ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

2 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

3 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago