ಬೀದರ್: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಕ್ಷದಲ್ಲಿ ಪ್ರಸ್ತುತ ದಿನಗಳಲ್ಲಿ ಎರಡು ಬಣಗಳು ಇರಬಹುದು. ಆದರೆ ಎಲ್ಲಾ ಭಿನ್ನಮತಗಳನ್ನು ಮುಂದಿನ ದಿನಗಳಲ್ಲಿ ಹೈಕಮಾಂಡ್ ಸರಿಪಡಿಸುತ್ತದೆ. ಯತ್ನಾಳ್ ವೈಯಕ್ತಿಕವಾಗಿ ಹೋರಾಟ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ನಮ್ಮ ಪಕ್ಷ ಈಗ ಎರಡು ಬಣಗಳಾಗಿದ್ದರೂ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಒಂದೇ ಆಗಿದೆ. ಅಲ್ಲದೇ ಯತ್ನಾಳ್ ಶಿಸ್ತು ಸಮಿತಿ ಮುಂದೆ ನೋಟಿಸ್ ಎಲ್ಲಾ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡುತ್ತಾರೆ. ಮುಂದಿನ ದಿನಗಳಲ್ಲಿ ಎರಡು ಬಣಗಳು ಒಂದಾಗುತ್ತದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ದೆಹಲಿಗೆ ತೆರಳಿದ ಆರ್.ಅಶೋಕ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಅಶೋಕ್ ಸೇರಿದಂತೆ ಎಲ್ಲಾ ನಾಯಕರೊಂದಿಗೆ ಭಿನ್ನಮತದ ಬಗ್ಗೆ ಮಾಹಿತಿ ಪಡೆಯುತ್ತಿದೆ. ಹೀಗಾಗಿ ಅಶೋಕ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…