ರಾಜ್ಯ

ಒಂದು ಸಲ ಬಿಜೆಪಿ ಅಧ್ಯಕ್ಷರಾದರೆ ಎಲ್ಲರು ಒಪ್ಪಬೇಕು: ಶಾಸಕ ಯತ್ನಾಳ್‌ ಮಾಜಿ ಸಚಿವ ಶ್ರೀರಾಮುಲು ತಿರುಗೇಟು

ಬೀದರ್‌: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಕ್ಷದಲ್ಲಿ ಪ್ರಸ್ತುತ ದಿನಗಳಲ್ಲಿ ಎರಡು ಬಣಗಳು ಇರಬಹುದು. ಆದರೆ ಎಲ್ಲಾ ಭಿನ್ನಮತಗಳನ್ನು ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಸರಿಪಡಿಸುತ್ತದೆ. ಯತ್ನಾಳ್‌ ವೈಯಕ್ತಿಕವಾಗಿ ಹೋರಾಟ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮ ಪಕ್ಷ ಈಗ ಎರಡು ಬಣಗಳಾಗಿದ್ದರೂ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಒಂದೇ ಆಗಿದೆ. ಅಲ್ಲದೇ ಯತ್ನಾಳ್‌ ಶಿಸ್ತು ಸಮಿತಿ ಮುಂದೆ ನೋಟಿಸ್‌ ಎಲ್ಲಾ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡುತ್ತಾರೆ. ಮುಂದಿನ ದಿನಗಳಲ್ಲಿ ಎರಡು ಬಣಗಳು ಒಂದಾಗುತ್ತದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ದೆಹಲಿಗೆ ತೆರಳಿದ ಆರ್‌.ಅಶೋಕ್‌ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ ಅಶೋಕ್‌ ಸೇರಿದಂತೆ ಎಲ್ಲಾ ನಾಯಕರೊಂದಿಗೆ ಭಿನ್ನಮತದ ಬಗ್ಗೆ ಮಾಹಿತಿ ಪಡೆಯುತ್ತಿದೆ. ಹೀಗಾಗಿ ಅಶೋಕ್‌ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

60 mins ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

1 hour ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

1 hour ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

16 hours ago