ಬೀದರ್: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಕ್ಷದಲ್ಲಿ ಪ್ರಸ್ತುತ ದಿನಗಳಲ್ಲಿ ಎರಡು ಬಣಗಳು ಇರಬಹುದು. ಆದರೆ ಎಲ್ಲಾ ಭಿನ್ನಮತಗಳನ್ನು ಮುಂದಿನ ದಿನಗಳಲ್ಲಿ ಹೈಕಮಾಂಡ್ ಸರಿಪಡಿಸುತ್ತದೆ. ಯತ್ನಾಳ್ ವೈಯಕ್ತಿಕವಾಗಿ ಹೋರಾಟ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮೇಲೆ ಯಾವುದೇ ಶಿಸ್ತು ಕ್ರಮವಾಗಲ್ಲ. ಹೀಗಾಗಿ ಪಕ್ಷದಿಂದ ಉಚ್ಛಾಟನೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ನಮ್ಮ ಪಕ್ಷ ಈಗ ಎರಡು ಬಣಗಳಾಗಿದ್ದರೂ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ ಒಂದೇ ಆಗಿದೆ. ಅಲ್ಲದೇ ಯತ್ನಾಳ್ ಶಿಸ್ತು ಸಮಿತಿ ಮುಂದೆ ನೋಟಿಸ್ ಎಲ್ಲಾ ಪ್ರಶ್ನೆಗಳಿಗೂ ಸ್ಪಷ್ಟನೆ ನೀಡುತ್ತಾರೆ. ಮುಂದಿನ ದಿನಗಳಲ್ಲಿ ಎರಡು ಬಣಗಳು ಒಂದಾಗುತ್ತದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ದೆಹಲಿಗೆ ತೆರಳಿದ ಆರ್.ಅಶೋಕ್ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಅಶೋಕ್ ಸೇರಿದಂತೆ ಎಲ್ಲಾ ನಾಯಕರೊಂದಿಗೆ ಭಿನ್ನಮತದ ಬಗ್ಗೆ ಮಾಹಿತಿ ಪಡೆಯುತ್ತಿದೆ. ಹೀಗಾಗಿ ಅಶೋಕ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…