ರಾಜ್ಯ

ಎಸ್‌ಐ ನೇಮಕಾತಿ, 15 ದಿನದೊಳಗೆ ಆದೇಶ ಪತ್ರ : ಪರಮೇಶ್ವರ

ಕೊಪ್ಪಳ : ಪಿಎಸ್‍ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್‍ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಾವಿರ ಹುದ್ದೆಗಳ ಖಾಲಿ ಇವೆ. ಕಳೆದ 2 ತಿಂಗಳ ಹಿಂದೆ 500 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಶೀಘ್ರವೇ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು.

ಇದನ್ನೂ ಓದಿ: 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 

ಹಗರಣಕ್ಕೆ ಸಿಲುಕಿದ್ದ 470ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಂಧುತ್ವ ಪ್ರಮಾಣ ಪತ್ರ ಪಡೆದು ಇನ್ನು 15 ದಿನಗಳ ಒಳಗಾಗಿ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದರು.

ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಯಾವುದೇ ಪ್ರಕರಣದಲ್ಲೂ ಪೊಲೀಸರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಮಾಡಿದ್ದೇವೆ. ಯಾರ ಮೇಲೂ ಒತ್ತಡ ಹೇರುವುದಿಲ್ಲ. ಅಪರಾಧಗಳನ್ನು ನಿಯಂತ್ರಿಸಿ ಶಾಂತಿ ಸುವ್ಯವಸ್ಥೆ ಪಾಲನೆ ನಮ್ಮ ಮೊದಲ ಆದ್ಯತೆ ಎಂದರು.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

33 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

37 mins ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

39 mins ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

41 mins ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

48 mins ago