ಕೊಪ್ಪಳ : ಪಿಎಸ್ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಾವಿರ ಹುದ್ದೆಗಳ ಖಾಲಿ ಇವೆ. ಕಳೆದ 2 ತಿಂಗಳ ಹಿಂದೆ 500 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಶೀಘ್ರವೇ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು.
ಇದನ್ನೂ ಓದಿ: 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಹಗರಣಕ್ಕೆ ಸಿಲುಕಿದ್ದ 470ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಂಧುತ್ವ ಪ್ರಮಾಣ ಪತ್ರ ಪಡೆದು ಇನ್ನು 15 ದಿನಗಳ ಒಳಗಾಗಿ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದರು.
ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಯಾವುದೇ ಪ್ರಕರಣದಲ್ಲೂ ಪೊಲೀಸರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಮಾಡಿದ್ದೇವೆ. ಯಾರ ಮೇಲೂ ಒತ್ತಡ ಹೇರುವುದಿಲ್ಲ. ಅಪರಾಧಗಳನ್ನು ನಿಯಂತ್ರಿಸಿ ಶಾಂತಿ ಸುವ್ಯವಸ್ಥೆ ಪಾಲನೆ ನಮ್ಮ ಮೊದಲ ಆದ್ಯತೆ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…