ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ ಎಸ್. ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.
ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.
ತೆರಿಗೆ ಸೋರಿಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1.22,821 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಕೆ. ಗೋವಿಂದರಾಜು ಹಾಗೂ ನಜೀರ್ ಅಹ್ಮದ್, ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರು ಉಪಸ್ಥಿತರಿದ್ದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…