ರಾಜ್ಯ

ತೆರಿಗೆ ಸಂಗ್ರಹದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳು ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. ಕದಂಬರು ಕರ್ನಾಟಕದಲ್ಲಿ ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ. ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ. ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ ಎಸ್. ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.

ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ. ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.

ತೆರಿಗೆ ಸೋರಿಹೋಗದಂತೆ ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ. 2022-23 ನೇ ಸಾಲಿನಲ್ಲಿ 1.22,821 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ ಇತರರಿಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಕೆ. ಗೋವಿಂದರಾಜು ಹಾಗೂ ನಜೀರ್ ಅಹ್ಮದ್, ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೂ ಮಳೆಗಾಗಿ ಕಾದಿರುವ ಕಾಫಿ ಬೆಳೆಗಾರರು

ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

2 hours ago

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…

2 hours ago

ಅವ್ಯವಸ್ಥೆಯಿಂದ ಕೂಡಿದ ಚರಂಡಿ ಕಾಮಗಾರಿ: ಆರೋಪ

ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…

2 hours ago

ನಾ.ದಿವಾಕರ ಅವರ ವಾರದ ಅಂಕಣ: ಎಳೆ ಪ್ರತಿಭೆಗೆ ಸಾಕ್ಷಿಯಾದ ರಂಗ ಪ್ರಯೋಗ

ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ.  ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…

3 hours ago

ಶಂಕರಾಚಾರ್ಯರ ಬಂಧನಕ್ಕೆ ವೇದಿಕೆ ಸಿದ್ಧ!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…

3 hours ago

ಮೊಬೈಲ್ ಮಿತ ಬಳಕೆ; ವಿದ್ಯಾರ್ಥಿಗಳ ಬಯಕೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…

3 hours ago