ರಾಜ್ಯ

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು.

ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago