ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ.
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಕ್ಷೇತ್ರಕ್ಕೂ ಕೂಡ ಅಂದೇ ಮತದಾನ ನಡೆಯಲಿದೆ.
ಈ ಸಂಬಂಧ ಎರಡು ಪಕ್ಷಗಳ ಪ್ರಚಾರ ಅಬ್ಬರವಾಗಿದ್ದು, ನಾಳೆ (ಏ. 28) ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಭೇಟಿ ನೀಡಿ ಮತದಾರರಿಗೆ ಧಾಳ ಬೀಸಲಿದ್ದಾರೆ.
ಏ.28 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಚಿಕ್ಕೋಡಿ, ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮೋದಿ ಮತಪ್ರಚಾರ ಮಾಡಲಿದ್ದಾರೆ. ಇದೇ ವೇಳೆ ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಚಿಕ್ಕೊಡಿ ವ್ಯಾಪ್ತಿಯ ಉಗಾರ್ ಖುರ್ದ್ ಹಾಗೂ ಬೆಳಗಾವಿ ವ್ಯಾಪ್ತಿಯ ಯರಗಟ್ಟಿಹಳ್ಳಿಯ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಣದಲ್ಲಿದ್ದಾರೆ.
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…