ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ.
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಕ್ಷೇತ್ರಕ್ಕೂ ಕೂಡ ಅಂದೇ ಮತದಾನ ನಡೆಯಲಿದೆ.
ಈ ಸಂಬಂಧ ಎರಡು ಪಕ್ಷಗಳ ಪ್ರಚಾರ ಅಬ್ಬರವಾಗಿದ್ದು, ನಾಳೆ (ಏ. 28) ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಭೇಟಿ ನೀಡಿ ಮತದಾರರಿಗೆ ಧಾಳ ಬೀಸಲಿದ್ದಾರೆ.
ಏ.28 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಚಿಕ್ಕೋಡಿ, ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮೋದಿ ಮತಪ್ರಚಾರ ಮಾಡಲಿದ್ದಾರೆ. ಇದೇ ವೇಳೆ ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಚಿಕ್ಕೊಡಿ ವ್ಯಾಪ್ತಿಯ ಉಗಾರ್ ಖುರ್ದ್ ಹಾಗೂ ಬೆಳಗಾವಿ ವ್ಯಾಪ್ತಿಯ ಯರಗಟ್ಟಿಹಳ್ಳಿಯ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಣದಲ್ಲಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…