ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ.
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಕ್ಷೇತ್ರಕ್ಕೂ ಕೂಡ ಅಂದೇ ಮತದಾನ ನಡೆಯಲಿದೆ.
ಈ ಸಂಬಂಧ ಎರಡು ಪಕ್ಷಗಳ ಪ್ರಚಾರ ಅಬ್ಬರವಾಗಿದ್ದು, ನಾಳೆ (ಏ. 28) ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಭೇಟಿ ನೀಡಿ ಮತದಾರರಿಗೆ ಧಾಳ ಬೀಸಲಿದ್ದಾರೆ.
ಏ.28 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಚಿಕ್ಕೋಡಿ, ಬೆಳಗಾವಿ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮೋದಿ ಮತಪ್ರಚಾರ ಮಾಡಲಿದ್ದಾರೆ. ಇದೇ ವೇಳೆ ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಚಿಕ್ಕೊಡಿ ವ್ಯಾಪ್ತಿಯ ಉಗಾರ್ ಖುರ್ದ್ ಹಾಗೂ ಬೆಳಗಾವಿ ವ್ಯಾಪ್ತಿಯ ಯರಗಟ್ಟಿಹಳ್ಳಿಯ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ನಿಂದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಕಣದಲ್ಲಿದ್ದಾರೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…