ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ಪ್ರಾಸಿಕ್ಯೂಷನ್ ವಿಚಾರವಾಗಿ ಬಿಗ್ಶಾಕ್ ನೀಡಿದ ನಂತರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶದ ಪ್ರತಿ ಪಡೆದು ಓದಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನ್ಯಾಯಾಲಯಕ್ಕೆ ಸೆಕ್ಷನ್ 218ರ ಅಡಿಯಲ್ಲಿ ಅಭಿಯೋಜನೆಯನ್ನು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ. ಇನ್ನುಳಿದ ಸೆಕ್ಷನ್ 17ಎ ಅಡಿಯ ಅರ್ಜಿಯನ್ನು ಮಾತ್ರ ಸ್ವೀಕರಿಸಿ ತನಿಖೆಗೆ ಆದೇಶ ನೀಡಿದೆ. ಹೀಗಾಗಿ ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದರು.
ಹೈಕೋರ್ಟ್ ತನಿಖೆಗೆ ಆದೇಶ ನೀಡಿ ತೀರ್ಪು ನೀಡಿರುವ 17ಎ ಅಡಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ತನಿಖೆಗೆ ಅವಕಾಶ ಇದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ತಜ್ಞರ ಜೊತೆ ಸಮಾಲೋಚನೆ ನಡೆಸಿ ಕಾನೂನು ಹೋರಾಟದ ರೂಪುರೇಷೆಯನ್ನು ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…