ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ದಾವಣಗೆರೆಯಲ್ಲಿ ಇಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳ ಅವಕಾಶವಾದಿ ರಾಜಕಾರಣ ಯಾವ ರೀತಿ ಇರುತ್ತದೆ ಎಂಬುದು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಜಗಜ್ಜಾಹೀರು ಆಗಿದೆ. ಅಹಿಂದ ವರ್ಗದಲ್ಲಿ ಪ್ರಮುಖ ಭಾಗವಾಗಿರುವ ಮುಸ್ಲಿಂ ಜನಾಂಗದ ಮತಗಳಿಂದಲೇ ರಾಜಕೀಯ ಶಕ್ತಿ ಬಳಸಿಕೊಂಡ ಸಿದ್ದರಾಮಯ್ಯನವರು, ಈಗ ನೋಡಿದರೆ ಕಣದಲ್ಲಿರುವ ಯಾವೊಬ್ಬ ಮುಸ್ಲಿಂ ಅಭ್ಯರ್ಥಿಗೂ ಮತ ಹಾಕಬೇಡಿ ಎಂದು ಬಹಿರಂಗವಾಗಿ ಕರೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಎಂದರೆ ಹೀಗೆನಾ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಅಹಿಂದ ವರ್ಗದ ನಾಯಕ ನಾನು, ಅಹಿಂದ ವರ್ಗಕ್ಕೆ ದೊಡ್ಡ ಕೊಡುಗೆ ನೀಡಿದ್ದೇನೆ ಎನ್ನುತ್ತಾರೆ. ಆದರೆ ವಾಲ್ಮೀಕಿ ನಿಗಮದ ಕಥೆ ಏನಾಯ್ತು? ಅಲ್ಲಿ ಲೂಟಿಯಾಗಿದೆ ಎಂಬುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಪ್ರತಿಪಕ್ಷಗಳು ಹೇಳಿದಷ್ಟು ಪ್ರಮಾಣದಲ್ಲಿ ದುಡ್ಡು ಹೊಡೆದಿಲ್ಲ, ಆದರೂ ಸ್ವಲ್ಪ ದುಡ್ಡು ಹೊಡೆದಿದ್ದೇವೆ ಎಂದು ಹೇಳುತ್ತಾರೆ. ದೇವರಾಜ್ ಅರಸು ನಿಗಮದ ಮೂಲಕ ಬಡವರಿಗೆ ನೀಡಲಾಗುವ ಗಂಗಾ ಕಲ್ಯಾಣ ಯೋಜನೆಯನ್ನು ಲೂಟಿ ಆಗಿದೆ. ಒಬ್ಬರು ಇಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ. ಅಂತಹ ಆಯೋಜನೆಯನ್ನು ಕೂಡ ಇವರು ಬಿಟ್ಟಿಲ್ಲ ಎಂದು ಅವರು ಕಿಡಿಕಾರಿದರು.
ಉಪಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜೊತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಪಕ್ಷ ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನತೆಯ ಬಗ್ಗೆ ನಮಗೆ ಬದ್ಧತೆ ಇದೆ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಇವರಿಗೆ ಅದು ಯಾವ ರೀತಿಯ ಬದ್ಧತೆ ಇದೆಯೋ ನನಗೆ ಗೊತ್ತಿಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ಉಪ ಚುನಾವಣೆ ಕಣದಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಜನತೆಗೆ ಹೇಳುವುದನ್ನು ಬಿಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಪದ ಬಳಕೆಯನ್ನು ನಾನು ಗಮನಿಸಿದ್ದೇನೆ. ಇದು ಜವಾಬ್ದಾರಿಯುತ ಮುಖ್ಯಮಂತ್ರಿ ಪದವಿಯಲ್ಲಿ ಕೂತಿರುವ ವ್ಯಕ್ತಿಗೆ ಭೂಷಣವಲ್ಲ ಎಂದು ಕುಮಾರಸ್ವಾಮಿಯವರು ಕಟುವಾಗಿ ಟೀಕಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…