ರಾಜ್ಯ

ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ : ಮಾಧ್ಯಮದವರಿಗೆ ನೋ ಬೈಟ್‌ ಎಂದ ಸಿಎಂ

ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಭಾನುವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ನಂತರ ಭುಗತಹಳ್ಳಿಯ ಫಾರಂಹೌಸ್ ಒಂದರಲ್ಲಿ ಏರ್ಪಡಿಸಲಾಗಿದ್ದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ವರ್ತುಲ ರಸ್ತೆಯಲ್ಲಿ ಇರುವ ಖಾಸಗಿ ಹೋಟೆಲ್ ಒಂದರಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡರು. ಸಂಜೆ ೪ ಗಂಟೆ ವೇಳೆಗೆ ಅವರು ಬೆಂಗಳೂರಿಗೆ ವಾಪಸ್ಸಾದರು.

ಇದನ್ನು ಓದಿ: ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

ಮಾಧ್ಯಮಗಳೊಂದಿಗೆ ಮುನಿಸು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಮಧ್ಯಾಹ್ನ ೧೨ ಗಂಟೆಯಿಂದಲೇ ವಿಮಾನ ನಿಲ್ದಾಣದಲ್ಲಿ ಕಾದಿದ್ದರು.

೨.೩೦ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ ಅವರು ಮಾಧ್ಯಮದವರನ್ನು ಕಂಡೊಡನೆ ನೋ ಬೈಟ್ ಎಂದು ಹೇಳುತ್ತಾ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ಕಾರನ್ನು ಏರಿ ಬೀಗರೂಟ ಕಾರ್ಯಕ್ರಮಕ್ಕೆ ತೆರಳಿದರು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ತಿಮ್ಮಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್,ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago