ರಾಜ್ಯ

ಅವರಿಗೆ ಕೊಡಿ, ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? – ಸಚಿವ ಎಚ್ ಸಿ ಮಹದೇವಪ್ಪಾ

ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

7 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

8 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

8 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

8 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

9 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

9 hours ago