ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…