ರಾಜ್ಯ

ಅವರಿಗೆ ಕೊಡಿ, ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? – ಸಚಿವ ಎಚ್ ಸಿ ಮಹದೇವಪ್ಪಾ

ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು ನನ್ನ ಕೈಯಲ್ಲೂ ಇಲ್ಲ ಧರ್ಮಗುರುಗಳ ಕೈಯಲ್ಲೂ ಇಲ್ಲ. 2023 ರಲ್ಲಿ ವಿಧಾನಸಭೆ ಚುನಾವಣೆ ನಡೆದು ರಾಜ್ಯದ ಮತದಾರರು ಕಾಂಗ್ರೆಸ್‌ಗೆ 135 ಶಾಸಕರನ್ನು ಆಯ್ಕೆ ಮಾಡಿದ್ರು. ಪಕ್ಷದ ಹೈಕಮಾಂಡ್ ವೀಕ್ಷಕರನ್ನು ಕಳಿಸಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಯಿತು.. ಶಾಸಕಾಂಗ ಪಕ್ಷದ ನಾಯಕರ ಸ್ಪರ್ಧೆಯಲ್ಲಿ ಒಬ್ಬೊಬ್ಬ ಶಾಸಕರು ಯಾರು ಆಯ್ಕೆ ಆಗಬೇಕು ಎಂಬುದನ್ನು ಚೀಟಿಯಲ್ಲಿ ಹೆಸರು ಬರೆದುಕೊಟ್ಟಿದ್ದರು. ಇದನ್ನು ಲೆಕ್ಕ ಹಾಕಿದಾಗ ಸಿದ್ದರಾಮಯ್ಯ ಅವರು ಹೆಚ್ಚು ಶಾಸಕರ ಬೆಂಬಲ ಪಡೆದು ಆಯ್ಕೆ ಆಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ ಎಂದು ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

18 seconds ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

16 mins ago

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

4 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

4 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

4 hours ago

ಬೀದಿ ದೀಪಗಳ ನಿರ್ವಹಣೆ ಕೊರತೆ; ಸಾರ್ವಜನಿಕರ ವ್ಯಥೆ

ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…

4 hours ago