ಕೋಲಾರ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಿ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ಮೈಸೂರು, ಚಾಮರಾಜನಗರಕ್ಕೆ ಬಂದು ಚುನಾವಣಾ ಪ್ರಚಾರ ಮಾಡುತ್ತಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದು, ಮೈಸೂರು, ಚಾಮರಾಜನಗರ ಗೆಲ್ಲದ್ದಿದ್ದರೆ ಸಿಎಂ ಸ್ಥಾನಕ್ಕೆ ಕಂಟಕವಾಗುತ್ತೆ ಎನ್ನುವ ಮಾತುಗಳು ಹರಿದಾಡುತ್ತಿದೆ.
ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನ ಶಿಷ್ಯ ಎಂದು ಗುರುತಿಸಿಕೊಂಡಿರುವ ಸಚಿವ ಬೈರತಿ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಇಂದು (ಏಪ್ರಿಲ್ 18) ಕೋಲಾರ ನಗರದಲ್ಲಿ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಸಚಿವ ಬೈರತಿ ಸುರೇಶ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕವಾಗಲಿದೆ. ಹೀಗಾಗಿ ಕುರುಬ ಸಮುದಾಯ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಮೇಲಿರಲಿ. ಒಂದು ವೇಳೆ ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸಿಎಂ ಸೀಟಿಗೆ ಕಂಟಕವಾಗಿಲಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಬಾರಿ ಸಂಚಲನ ಮೂಡಿಸಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…