ರಾಜ್ಯ

ವಾರದಲ್ಲಿ ನಾಲ್ಕು ದಿನ ಎಲ್ಲಾ ಶಾಲೆಗಳಲ್ಲಿ ಮೊಟ್ಟೆ ವಿತರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಜೀಂ ಪ್ರೇಮ್ ಜಿ ಪ್ರತಿಷ್ಠನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆಯನ್ನು ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದು ಹೇಳಿದರು.

ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು.

ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ ಎಂದು ಶಾಲಾ ಮಕ್ಕಳಿಗೆ ಕರೆ ನೀಡಿದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಒಳಮೀಸಲಾತಿಯಲ್ಲಿ ಬಲಗೈಗೆ ಅನ್ಯಾಯ : ಮಾ.25ಕ್ಕೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…

7 mins ago

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

2 hours ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

2 hours ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

2 hours ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

3 hours ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

4 hours ago