ರಾಜ್ಯ

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು ರೂಪಿಸಲು ಚಿಂತನೆ : ಸಿಎಂ

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣ, ಪಾವತಿ ಸುದ್ದಿಗಳಿಗೆ ಕಡಿವಾಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಪ್ರಜಾಪ್ರಭುತ್ವವಾದಿಯಾಗಿದ್ದು, ಪತ್ರಿಕಾ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೇನೆ. ಆದರೆ ಊಹೆಯ ಪತ್ರಿಕೋದ್ಯಮ ಅಪಾಯಕಾರಿ ಎಂದರು.

ಇಂದಿನ ಪತ್ರಿಕಾ ದಿನಾಚರಣೆಯಲ್ಲಿ ನಿಜ ಸುದ್ದಿಗಾಗಿ ಸಮರ ಎಂಬ ವಿಚಾರಗೋಷ್ಠಿ ನಡೆದಿದೆ. ಅದರ ಅರ್ಥ ಪತ್ರಿಕೋದ್ಯಮದಲ್ಲಿ ಸುಳ್ಳು ಸುದ್ದಿ ಬಂದು ಸೇರಿಕೊಂಡಿದೆ ಎಂಬುದನ್ನು ಒಪ್ಪಿಕೊಂಡಂತಲ್ಲವೇ?, ಸುಳ್ಳು ಸುದ್ದಿ ಜಾಸ್ತಿಯಾಗಿವೆ ಎಂದು ಹೇಳಿದರು.

ಪತ್ರಿಕೋದ್ಯಮ ನಾಲ್ಕನೇ ಅಂಗವಿದ್ದಂತೆ. ಇದು ನಿರ್ಭೀತಿ ಮತ್ತು ನಿಸ್ಪಕ್ಷಪಾತವಾಗಿರಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಒಂದು ಪಕ್ಷದ ಪರವಾಗಿ ಕೇಂದ್ರದಲ್ಲಿ ಆಡಳಿತದಲ್ಲಿರುವವರ ಬೆಂಬಲವಾಗಿ ಹೆಚ್ಚಿನ ಓಲೈಕೆಗಳು ಕಂಡುಬರುತ್ತಿವೆ. ಪ್ರಧಾನಿಯಾಗಲೀ, ಮುಖ್ಯಮಂತ್ರಿಯಾಗಲೀ ಯಾರ ಪರವಾಗಿಯೂ ಪತ್ರಿಕೋದ್ಯಮ ನಿಲ್ಲಬಾರದು. ದಲಿತರು, ದಮನಿತರ ಪರವಾದ ನೈಜತೆಗಳನ್ನು ಮುಚ್ಚಿಡದೆ ವಾಸ್ತವಾಂಶಗಳನ್ನು ಜನರ ಮುಂದಿಡಬೇಕು ಎಂದರು.

ಇತ್ತೀಚೆಗೆ ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮೇಳನದಲ್ಲಿ ತಾವು ಸ್ಪಷ್ಟ ಸೂಚನೆ ನೀಡಿದ್ದು, ಸುಳ್ಳು ಸುದ್ದಿ ಮತ್ತು ದ್ವೇಷಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದೇನೆ ಎಂದರು.

ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ವಾಕಿಟಾಕಿ ಸದ್ದು ಮಾಡಿದಾಗ ಏಯ್, ಮೊದಲು ಅದನ್ನು ಬಂದ್ ಮಾಡಯ್ಯ ಎಂದು ಮುಖ್ಯಮಂತ್ರಿ ಹೇಳಿದರು. ನಾವಿಲ್ಲಿ ಗಂಭೀರ ಚರ್ಚೆ ಮಾಡುತ್ತಿದ್ದೇವೆ. ಈ ರೀತಿಯ ಸದ್ದು ಅಡಚಣೆ ಮಾಡುತ್ತದೆ. ವಾಕಿಟಾಕಿಯ ಸೂಚನೆಗಳು ಬೇಕು. ಆದರೆ ಸದ್ದಾಗಬಾರದು ಎಂದು ಮುಖ್ಯಮಂತ್ರಿ ಹೇಳಿದಾಗ ಕಾರ್ಯಕ್ರಮದಲ್ಲಿ ನಗೆಯ ಅಲೆಯುಕ್ಕಿತು.

ನಾನು ಒಂದು ಪಕ್ಷದ ರಾಜಕಾರಣಿಯಾಗಿರಬಹುದು. ಆದರೆ ನಾನು ಹೇಳುವ ಅಂಶಗಳಲ್ಲಿರುವ ಜನ ಸ್ಪಂದನೆಯ ನಿಲುವುಗಳನ್ನು ಅಲ್ಲಗಳೆಯಬಾರದು ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್, ಸಾಹಿತಿ ರೆಹಮತ್ ತರೀಕರೆ, ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯಿಷಾ ಖಾನಂ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಪ್ರಭಾಕರ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

36 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago