ರಾಜ್ಯ

ಮೋದಿ ಬಗ್ಗೆ ಅನಗತ್ಯ ಟೀಕೆ ಮಾಡುವುದು ಸಿದ್ದರಾಮಯ್ಯ ಚಾಳಿ: ಬಿ.ಎಸ್‌ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ. ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗ ನಿಗಮಗಳಿಗೆ ಹಣ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಆರೋಪಗಳ ಸುರಿಮಳೆಗೈದಿದ್ದಾರೆ.

ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕದ ಖರ್ಚು ರೈತನೇ ಭರಿಸಬೇಕು ಎಂಬ ಆದೇಶ ಹೊರಡಿಸಲು ಸರ್ಕಾರ ಹೊರಟಿದೆ. ಉಚಿತ ಬಸ್ ಹೊರತು ಬೇರೆ ಸರ್ಕಾರದ ಬೇರೆ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಗೆ ಬಂದಿಲ್ಲ. ಅರ್ಧದಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ನಿಧಿ ಕೊಟ್ಟಿಲ್ಲ. ಇದು ಲೂಟಿ ಸರ್ಕಾರ, ಐಟಿ ದಾಳಿಯಿಂದ ಸರ್ಕಾರದ ಲೂಟಿ ಬಯಲಾಗಿದೆ ಎಂದು ಆರೋಪಿಸಿದರು.

https://x.com/BJP4Karnataka/status/1719955520419709340?s=20

ಬಣಗಳ ನಡುವಿನ ಜಗಳ: ಸಿದ್ದರಾಮಯ್ಯ- ಡಿಕೆಶಿ ಬಣಗಳ ನಡುವೆ ನಾಯಕತ್ವದ ಜಗ್ಗಾಟ ತಾರಕಕ್ಕೇರಿದೆ. ಮೊದಲಿಗಿಂತ ಹೆಚ್ಚು ವರ್ಗಾವಣೆ ದಂಧೆ ಮಿತಿಮೀರಿದೆ. ಡಿಸಿಎಂ ಕಟ್ಟಿ ಹಾಕಲು ಡಿನ್ನರ್ ಮೀಟಿಂಗ್ ಶುರುವಾಗಿದೆ.

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ಬೆಳಗ್ಗೆ ಎದ್ದರೆ ನಾಯಿ-ನರಿಗಳಂತೆ ಕಚ್ಚಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಮುಂದೆ ಹೋಗುತ್ತಿಲ್ಲ, ಸರ್ಕಾರದ ಚಕ್ರಗಳಲ್ಲಿ ಗಾಳಿ ಇಲ್ಲ, ಮುಖ್ಯಮಂತ್ರಿಗಳಿಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಹೇಳಿದರು.

ಮಳೆ ಕೊರತೆ ಅರಿವಿದ್ದರೂ ಮುಂಜಾಗ್ರತಾ ಕ್ರಮ ವಹಿಸಲಿಲ್ಲ. ಭೀಕರ ಬರ ಪರಿಸ್ಥಿತಿ ಇದೆ. ಬರ ಪರಿಹಾರ ಕೊಡದೇ ಕೇಂದ್ರಕ್ಕೆ ಮೂದಲಿಸುವ ಕೆಲಸ ಮಾಡ್ತಿದ್ದಾರೆ. ಆಡಳಿತ ಯಂತ್ರ ಸರಿಪಡಿಸುವ ಬದಲು ವಿಪಕ್ಷಗಳ ಮೇಲೆ ಹರಿಹಾಯ್ತಿರೋದು ಪ್ರಜಾಪ್ರಭುತ್ವದ ಅಣಕ. ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಕೇಂದ್ರ ಬರ ಪರಿಹಾರ ನಿಶ್ಚಿತವಾಗಿ ಕೊಡುತ್ತದೆ. ಆದರೆ ಇವರು ಕೇಂದ್ರದ ಪರಿಹಾರಕ್ಕೆ ಕಾಯುತ್ತಿದ್ದಾರೆ. ಸಂಪನ್ಮೂಲಗಳ ಕೊರತೆಯಿಂದ ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ. ಸುರ್ಜೇವಾಲಾ, ವೇಣುಗೋಪಾಲ ಕಲೆಕ್ಷನ್ ಟಾರ್ಗೆಟ್ ಕೊಡಲು ಭೇಟಿ ಕೊಟ್ಟಿದ್ದಾರೆ. ಇದು ಎಐಸಿಸಿಗೆ ಎಟಿಎಂ ಸರ್ಕಾರ ಆಗಿದೆ. ಮೋದಿಯವರನ್ನು ನಿತ್ಯ ಟೀಕಿಸೋದು ಸಿದ್ದರಾಮಯ್ಯ ಚಾಳಿಯಾಗಿದೆ ಎಂದು ಟೀಕಿಸಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಎನ್‌ಡಿಆರ್‌ಎಫ್‌ನಡಿ 12,407 ಕೋಟಿ, ಎಸ್‌ಡಿಆರ್‌ಎಫ್‌ನಡಿ 3,377 ಕೋಟಿ ರೂಪಾಯಿ ಹಣ ಕೇಂದ್ರ ಕೊಟ್ಟಿದೆ. ರಾಜ್ಯದಲ್ಲಿ 54 ಹೆದ್ದಾರಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಮುಂದಿನ ಮಾರ್ಚ್‌ಗೆ ಸಿದ್ಧವಾಗಲಿದೆ. ಹೀಗೆ ಹಲವು ಕಾಮಗಾರಿಗಳು ಕೇಂದ್ರದಿಂದ ರಾಜ್ಯದಲ್ಲಿ ನಡೆಯುತ್ತಿವೆ ಎಂದರು. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ ಎಂದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

5 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

7 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

7 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

7 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

7 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

7 hours ago