ರಾಜ್ಯ

ಕಾಲ್ತುಳಿತ ಪ್ರಕರಣ | ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಣೆ ನೀಡಿದ್ದೇವೆ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಕುನಾ, ಐದು ಪೊಲೀಸ್ ಅಧಿಕಾರಿಗಳ ಅಮಾನತ್ತು, ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ, ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆಯಾಗಿಲ್ಲ: ಇದೇ ತಿಂಗಳ 13 ರಂದು 16 ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.

ಕುಂಭಮೇಳದ ಕಾಲ್ತುಳಿತ ಘಟನೆ- ಅಲ್ಲಿನ ಸಿಎಂ ಜವಾಬ್ದಾರರಲ್ಲವೇ?: ಕೇಂದ್ರದ ಸಂಸತ್ತಿನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ, ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ನಡೆದ ಘಟನೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ. ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.

ಇಡಿ ತನಿಖಾ ಸಂಸ್ಥೆ 100ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago