Government will be rock solid for five years CM Siddaramaiah
ಹೊಸದಿಲ್ಲಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚಿಸಿ, ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಮ್ಯಾಜಿಸ್ಟ್ರಿಯಲ್ ತನಿಖೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮೈಕೆಲ್ ಕುನಾ, ಐದು ಪೊಲೀಸ್ ಅಧಿಕಾರಿಗಳ ಅಮಾನತ್ತು, ಗುಪ್ತಚರ ಇಲಾಖೆಯ ಮುಖ್ಯಸ್ಥರ ಬದಲಾವಣೆ, ರಾಜಕೀಯ ಕಾರ್ಯದರ್ಶಿಗಳ ಬದಲಾವಣೆಯಂತಹ ಸರ್ಕಾರದ ಕ್ರಮಗಳು ಸಮರ್ಪಕವಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏಕಸದಸ್ಯ ಆಯೋಗದ ತನಿಖಾ ವರದಿಯನ್ನು ಆಧರಿಸಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆಯಾಗಿಲ್ಲ: ಇದೇ ತಿಂಗಳ 13 ರಂದು 16 ನೇ ಹಣಕಾಸಿನ ಆಯೋಗದ ಅಧ್ಯಕ್ಷರನ್ನು ಭೇಟಿಯಾಗಲು ನವದೆಹಲಿಗೆ ಆಗಮಿಸಲಿದ್ದೇನೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.
ಕುಂಭಮೇಳದ ಕಾಲ್ತುಳಿತ ಘಟನೆ- ಅಲ್ಲಿನ ಸಿಎಂ ಜವಾಬ್ದಾರರಲ್ಲವೇ?: ಕೇಂದ್ರದ ಸಂಸತ್ತಿನಲ್ಲಿ ಬೆಂಗಳೂರಿನ ಕಾಲ್ತುಳಿತದ ಘಟನೆ ಚರ್ಚೆಗೆ ಬರುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ಮೊದಲು ಕುಂಭಮೇಳದಲ್ಲಿ ನಡೆದ ಕಾಲ್ತುಳಿತ, ಪ್ರಧಾನಿಯವರು ಉದ್ಘಾಟಿಸಿದ ಸೇತುವೆ ಕುಸಿದು ಜನ ಮೃತಪಟ್ಟ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯಲಿ. ಬೆಂಗಳೂರಿನಲ್ಲಿ ನಡೆದ ಘಟನೆ ಸರ್ಕಾರಕ್ಕೆ ದು:ಖದ ಸಂಗತಿಯಾಗಿದೆ. ಯುವಜನರ ಸಾವು ಎಲ್ಲರಿಗೂ ನೋವು ತರುವ ವಿಚಾರ. ಕುಂಭಮೇಳದ ಘಟನೆಯಲ್ಲಿ ಜನರ ಸಾವು ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.
ಇಡಿ ತನಿಖಾ ಸಂಸ್ಥೆ 100ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ತೆಗೆದುಕೊಂಡಿರುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…