ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ತಮ್ಮ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ : ಇನ್ನು, ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ”ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ.
ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ” ಎಂದು ಕಿಡಿಕಾರಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…