ರಾಜ್ಯ

ಸಿದ್ದರಾಮಯ್ಯ-ಡಿಕೆಶಿಗೆ ಮೋದಿಯವರನ್ನು ಟೀಕೆ ಮಾಡುವಷ್ಟು ದುರಹಂಕಾರ ಬಂದಿದೆ: ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ತಮ್ಮ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ : ಇನ್ನು, ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ”ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗುತ್ತಿದೆ. ಆದರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ.

ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ” ಎಂದು ಕಿಡಿಕಾರಿದರು.

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

30 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

56 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago