ರಾಜ್ಯ

ಉಚಿತ ವಿದ್ಯುತ್‌ ವಿಚಾರವಾಗಿ ಶಾಕ್‌ ನೀಡಿದ ಸಿದ್ದರಾಮಯ್ಯ !

ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ.

ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಇನ್ಮುಂದೆ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದವರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿ ಮನೆಗೂ 200 ಯೂನಿಟ್ ಫ್ರೀ ವಿದ್ಯುತ್ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಬಳಿಕ ಷರತ್ತುಗಳನ್ನು ವಿಧಿಸಿತ್ತು. ಇದೀಗ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದೆ.

ಹೀಗಾಗಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಬಳಸಿದ ಅಷ್ಟೂ ಯೂನಿಟ್ ಗಳಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಫುಲ್ ಬಿಲ್ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚು. ಆದರೆ ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಸಾಧ್ಯವಾಗದೇ ಇರುವುದರಿಂದ ಇಂತಹ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

4 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

4 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

6 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

6 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

8 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

9 hours ago