ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ.
ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಇನ್ಮುಂದೆ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದವರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿ ಮನೆಗೂ 200 ಯೂನಿಟ್ ಫ್ರೀ ವಿದ್ಯುತ್ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಬಳಿಕ ಷರತ್ತುಗಳನ್ನು ವಿಧಿಸಿತ್ತು. ಇದೀಗ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದೆ.
ಹೀಗಾಗಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಬಳಸಿದ ಅಷ್ಟೂ ಯೂನಿಟ್ ಗಳಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಫುಲ್ ಬಿಲ್ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚು. ಆದರೆ ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಸಾಧ್ಯವಾಗದೇ ಇರುವುದರಿಂದ ಇಂತಹ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…