Mysore
24
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್‌ ಆದ ದರ್ಶನ್‌ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್‌ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜೈಲಿನೊಳಗೆ ದರ್ಶನ್‌ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟಂತೆ ಈವರೆಗೆ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೇ ಅವರನ್ನು ಅಮಾನತು ಮಾಡಲಾಗುವುದು ಎಂದು ಖಡಕ್‌ ಉತ್ತರ ನೀಡಿದರು.

ಗೃಹಮಂತ್ರಿಗಳಿಗೆ ಇಂದು ಜೈಲಿಗೆ ಭೇಟಿ ನೀಡಿ ಇದಕ್ಕೆಲ್ಲಾ ಅವಕಾಶ ಮಾಡಿಕೊಟ್ಟಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಇನ್ನು ದರ್ಶನ್‌ ಸೇರಿ ಅವರ ಜೊತೆಗಿದ್ದ ಹಲವು ಆರೋಪಿಗಳನ್ನು ಸಹಾ ಬೇರೆಡೆಗೆ ಶಿಫ್ಟ್‌ ಮಾಡುವ ಬಗ್ಗೆ ಆಲೋಚನೆಯಿದೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಕೆಲಸವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

Tags:
error: Content is protected !!