ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್ ಆದ ದರ್ಶನ್ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜೈಲಿನೊಳಗೆ ದರ್ಶನ್ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟಂತೆ ಈವರೆಗೆ ಏಳು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೇ ಅವರನ್ನು ಅಮಾನತು ಮಾಡಲಾಗುವುದು ಎಂದು ಖಡಕ್ ಉತ್ತರ ನೀಡಿದರು.
ಗೃಹಮಂತ್ರಿಗಳಿಗೆ ಇಂದು ಜೈಲಿಗೆ ಭೇಟಿ ನೀಡಿ ಇದಕ್ಕೆಲ್ಲಾ ಅವಕಾಶ ಮಾಡಿಕೊಟ್ಟಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಇನ್ನು ದರ್ಶನ್ ಸೇರಿ ಅವರ ಜೊತೆಗಿದ್ದ ಹಲವು ಆರೋಪಿಗಳನ್ನು ಸಹಾ ಬೇರೆಡೆಗೆ ಶಿಫ್ಟ್ ಮಾಡುವ ಬಗ್ಗೆ ಆಲೋಚನೆಯಿದೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಕೆಲಸವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…