ರಾಜ್ಯ

ವಾಲ್ಮೀಕಿ ಹಗರಣವನ್ನು ಮೂರು ಸಂಸ್ಥೆಗಳಿಂದ ತನಿಖೆ ಮಾಡಲಾಗುತ್ತಿದೆ: ಸಿಎಂ

ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಎಸ್ಐಟಿ ಮತ್ತು ಇಡಿ ಸೇರಿ ಮೂರು ಇಲಾಖೆಗಳಿಂದ ತನಿಖೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿಂದು ಮಾಧ್ಯಮಗಳು ಎಸ್ಐಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ ಎಂದರು. ತನಿಖೆ ವರದಿ ಇನ್ನೂ ಬಂದಿಲ್ಲ ಎಂದರು.

ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.

ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು ೨೦೨೫ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

8 seconds ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

38 mins ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

3 hours ago