ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಎಸ್ಐಟಿ ಮತ್ತು ಇಡಿ ಸೇರಿ ಮೂರು ಇಲಾಖೆಗಳಿಂದ ತನಿಖೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿಂದು ಮಾಧ್ಯಮಗಳು ಎಸ್ಐಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ ಎಂದರು. ತನಿಖೆ ವರದಿ ಇನ್ನೂ ಬಂದಿಲ್ಲ ಎಂದರು.
ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.
ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…