ರಾಜ್ಯ

ವಾಲ್ಮೀಕಿ ಹಗರಣವನ್ನು ಮೂರು ಸಂಸ್ಥೆಗಳಿಂದ ತನಿಖೆ ಮಾಡಲಾಗುತ್ತಿದೆ: ಸಿಎಂ

ಮೈಸೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಎಸ್ಐಟಿ ಮತ್ತು ಇಡಿ ಸೇರಿ ಮೂರು ಇಲಾಖೆಗಳಿಂದ ತನಿಖೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿಂದು ಮಾಧ್ಯಮಗಳು ಎಸ್ಐಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ ಎಂದರು. ತನಿಖೆ ವರದಿ ಇನ್ನೂ ಬಂದಿಲ್ಲ ಎಂದರು.

ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.

ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

7 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

20 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

22 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago