ರಾಜ್ಯ

ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಿ: ಸಿಎಂ

ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ಸಿಎಂ ಸಲಹೆ ನೀಡಿದರು.

ಜತೆಗೆ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಮಾತನಾಡಿ, ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago