ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ಸಿಎಂ ಸಲಹೆ ನೀಡಿದರು.
ಜತೆಗೆ ಸಿಂಧುತ್ವ ಪ್ರಮಾಣ ಪತ್ರ ನೀಡುವ ಸಂಬಂಧ ಮಾತನಾಡಿ, ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಂಬೇಡ್ಕರ್ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…