ರಾಜ್ಯ

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ.

ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲನ್ನು 3.61%ರಿಂದ 4.7%ಗೆ ಏರಿಸಲಾಗಿದೆ. ಇದರಿಂದ ಅನಾಮತ್ತಾಗಿ ₹11,000 ಕೋಟಿಗೂ ಹೆಚ್ಚು ಹಣ ರಾಜ್ಯಕ್ಕೆ ಹರಿದುಬರುತ್ತದೆ. ಕೇಂದ್ರದಿಂದ ಹಣ ಬರುವುದು ಕಡಿಮೆ ಆಗಿಲ್ಲ ಎಂಬುದನ್ನು ಅವರ ಬಜೆಟ್ ಪುಸ್ತಕವೇ ಹೇಳುತ್ತದೆ!

ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು.

ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್. ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ! ಈ ಸಾಲ ₹1.16 ಲಕ್ಷ ಕೋಟಿಯಿಂದ ₹1.32 ಲಕ್ಷ ಕೋಟಿಗೆ ಏರಿದೆ!! ಮುಂದಿನ ವರ್ಷಕ್ಕೆ ₹9 ಲಕ್ಷ ಕೋಟಿ ಮೀರುವುದು ಗ್ಯಾರಂಟಿ. ಈ ಸಾಲದ ಗ್ಯಾರಂಟಿ ಭೀತಿ ಹುಟ್ಟಿಸುತ್ತದೆ.

ಸಾಲ ಮಾಡುತ್ತಿದ್ದೀರಿ, ಸರಿ. ಅದನ್ನು ಏನಕ್ಕೆ ಬಳಕೆ ಮಾಡುತ್ತಿದ್ದೀರಿ? ಸಾಲಕ್ಕೆ ತಕ್ಕಂತೆ ಬಂಡವಾಳ ವೆಚ್ಚವೂ ಆಗಬೇಕಲ್ಲವೇ? ದುರಂತವೆಂದರೆ, ಬಂಡವಾಳ ವೆಚ್ಚ ಎಲ್ಲಿದೆಯೋ ಕಳೆದ ಮೂರು ವರ್ಷಗಳಿಂದ ಅಲ್ಲೇ ಇದೆ. ಇವರು ಸಾಲ ಮಾಡಿ ಮೋಜು ಮಾಡುತ್ತಿದ್ದಾರೆ. ಸಾಲದ ಮೇಲೆ ಸಾಲ ಮಾಡಿ 140ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರಿಗೆ ಕ್ಯಾಬಿನೆಟ್ ದರ್ಜೆ, ಸ್ಟೇಟ್ ಮಿನಿಸ್ಟರ್ ದರ್ಜೆ ದಯಪಾಲಿಸಿ ಪೊಗದಸ್ತಾಗಿ ಸಾಕುತ್ತಿದ್ದಾರೆ. ಅನುತ್ಪಾದಕ ವೆಚ್ಚಕ್ಕೆ ಹಣ ಪೋಲಾಗುತ್ತಿದ್ದು, ಈ ಸರಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಜಿ ಕೇಂದ್ರವಾಗಿದೆ. ಸಾಲದ ದುಡ್ಡು ಅವರ ಕಿಸೆಗೆ ಹೋಗಿ ಸೇರುತ್ತಿದೆ. ವೋಟು ಕೊಟ್ಟ ಮಹಾಪಾಪಕ್ಕೆ ಜನತೆಯನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಧಾರುಣ ಬಜೆಟ್ ಇದಾಗಿದೆ ಎಂದು ಕಿಡಿಕಾರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

25 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago