ರಾಜ್ಯ

ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಮೇಲೆ ಬೆಟ್ಟದಷ್ಟು ಪ್ರೀತಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕೂ ಇಳೀತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ, ದೇಶದ ವಿಚಾರ ಬಂದಾಗ, ಕಾಶ್ಮೀರದ ಭಯೋತ್ಪಾದಕರ ದಾಳಿ, ಹತ್ಯೆಗಳ ಆ ಘಟನೆಯನ್ನು ಪ್ರತಿಯೊಬ್ಬ ಸ್ವಾಭಿಮಾನಿ ಕೂಡ ಖಂಡಿಸಿದ್ದಾರೆ. ಭಾರತ ಯಾವತ್ತೂ ಯುದ್ಧ ಸಾರಿದ ಇತಿಹಾಸ ಇಲ್ಲ. ಆದರೆ, ಇವತ್ತು ಭಾರತೀಯರ ರಕ್ಷಣೆ ಮಾಡಬೇಕಾದ ಸಂದರ್ಭದಲ್ಲಿ ಏನು ತೀರ್ಮಾನ ಮಾಡಬೇಕೋ ಅದನ್ನು ಪ್ರಧಾನಿಯವರು ಎಲ್ಲ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ ಎಂದರು.

ಇದರ ನಡುವೆ, ಸನ್ಮಾನ್ಯ ಸಿದ್ದರಾಮಯ್ಯನವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಖಂಡಿತ ಸರಿಯಲ್ಲ. ಯಡಿಯೂರಪ್ಪ ಅವರ ಮಾತಿನಂತೆ ಸಿದ್ದರಾಮಯ್ಯನವರು ಈ ದೇಶದ ಜನರ ಕ್ಷಮೆ ಕೂಡ ಕೇಳಬೇಕು. ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಆಕ್ಷೇಪಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

58 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago