ರಾಜ್ಯ

ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಮೇಲೆ ಬೆಟ್ಟದಷ್ಟು ಪ್ರೀತಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಲ್ಪಸಂಖ್ಯಾತರ ಬಗ್ಗೆ ಎಷ್ಟು ಪ್ರೀತಿ ಇದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕೂ ಇಳೀತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ, ದೇಶದ ವಿಚಾರ ಬಂದಾಗ, ಕಾಶ್ಮೀರದ ಭಯೋತ್ಪಾದಕರ ದಾಳಿ, ಹತ್ಯೆಗಳ ಆ ಘಟನೆಯನ್ನು ಪ್ರತಿಯೊಬ್ಬ ಸ್ವಾಭಿಮಾನಿ ಕೂಡ ಖಂಡಿಸಿದ್ದಾರೆ. ಭಾರತ ಯಾವತ್ತೂ ಯುದ್ಧ ಸಾರಿದ ಇತಿಹಾಸ ಇಲ್ಲ. ಆದರೆ, ಇವತ್ತು ಭಾರತೀಯರ ರಕ್ಷಣೆ ಮಾಡಬೇಕಾದ ಸಂದರ್ಭದಲ್ಲಿ ಏನು ತೀರ್ಮಾನ ಮಾಡಬೇಕೋ ಅದನ್ನು ಪ್ರಧಾನಿಯವರು ಎಲ್ಲ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ ಎಂದರು.

ಇದರ ನಡುವೆ, ಸನ್ಮಾನ್ಯ ಸಿದ್ದರಾಮಯ್ಯನವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಖಂಡಿತ ಸರಿಯಲ್ಲ. ಯಡಿಯೂರಪ್ಪ ಅವರ ಮಾತಿನಂತೆ ಸಿದ್ದರಾಮಯ್ಯನವರು ಈ ದೇಶದ ಜನರ ಕ್ಷಮೆ ಕೂಡ ಕೇಳಬೇಕು. ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಆಕ್ಷೇಪಿಸಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

1 hour ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

1 hour ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

1 hour ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

1 hour ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

4 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

4 hours ago