ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಗಾಂಜಾ ಹಾಗೂ ಇನ್ನಿತರ ಮಾದಕ ಸೇವನೆಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಶಾಸಕ ದಿನೇಶ್ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಮಾದಕ ವ್ಯಸನಕ್ಕೆ ಒಳಗಾಗಿ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿದ್ದಾರೆ, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ದಿನೇಶ್ ಗೂಳಿಗೌಡ ಎಚ್ಚರಿಸಿ ಗಮನ ಸೆಳೆದಿದ್ದರು. ಜಿಲ್ಲಾ ಮಟ್ಟದಲ್ಲಿ ಗಾಂಜಾ ಹಾಗೂ ಮಾದಕ ವಸ್ತು ಸೇವನೆಗಳ ಹಾವಳಿ ನಿಯಂತ್ರಣಕ್ಕೆ ವಿಶೇಷ ದಳ ರಚನೆ ಮಾಡಬೇಕು ಹಾಗೂ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಮಹಾನಿರ್ದೇಶಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…