Mysore
31
broken clouds

Social Media

ಸೋಮವಾರ, 15 ಜೂನ್ 2026
Light
Dark

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ. ಅವರ ಇಡೀ ಜೀವನ ಸಾಮಾಜಿಕ ನ್ಯಾಯದ ಸಿದ್ಧಾಂತದಡಿಯೇ ರಾಜಕಾರಣ ಮಾಡಿಕೊಂಡು ಬಂದಿರೋದು. ಅದರಲ್ಲಿ ಹೊಸದೇನೂ ಇಲ್ಲ. ಅವರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ ಎಂದು ಸಿಎಂ ಪರ ಬ್ಯಾಟಿಂಗ್‌ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತರನ್ನು ಸಿಎಂ ಮಾಡೋದು ಕಾಂಗ್ರೆಸ್‌ ಪಕ್ಷನೇ. ಇನ್ಯಾರು ಮಾಡುತ್ತಾರೆ? ಯಾವಾಗ ದಲಿತ ಸಿಎಂ ಮಾಡಬೇಕು ಎಂದು ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ವಿಪಕ್ಷಗಳಿಗೆ ತಮ್ಮ ಹುಳುಕು ಮುಚ್ಚಿಕೊಳ್ಳಲು ದಲಿತ ಸಿಎಂ ಕೂಗು ತಂದಿದ್ದಾರೆ ಎಂದು ತಿರುಗೇಟು ನೀಡಿದರು.

 

Tags:
error: Content is protected !!