ಕೊಪ್ಪಳ: ಸಿದ್ದರಾಮಯ್ಯರಿಗೆ ಈಗ ವಯಸ್ಸಾಗಿದೆ. ಹಾಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬಹುದು ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಈಗ ವಯಸ್ಸಾಗಿದೆ. ಅವರಿಗೆ ಆರೋಗ್ಯದ ಸಮಸ್ಯೆ ಕೂಡ ಇದೆ. ಹಾಗಾಗಿ ಅವರು ಸಿಎಂ ಸ್ಥಾನ ಬಿಟ್ಟು ಕೊಡಬಹುದು ಎಂದರು.
ಇನ್ನು ಡಿಕೆಶಿಯವರ ಹಿಂದೂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಹಿಂದೂವಾಗಿ ಹುಟ್ಟಿದ್ದಾರೆ. ಹಿಂದೂವಾಗಿಯೇ ಮುಂದುವರಿಯುತ್ತಾರೆ. ಅವರು ಮಾಡುತ್ತಿರುವ ಪೂಜೆ, ಹಿಂದೂ ಸಂಸ್ಕೃತಿ ಆಚರಣೆಯಾಗಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅವರ ರಾಜಕೀಯ ಏನೇ ಆಗಿರಲಿ, ಅವರು ಸಾರ್ವಜನಿಕವಾಗಿ ಪೂಜೆ ಪುನಸ್ಕಾರ ಮಾಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…