ರಾಜ್ಯ

ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ ನೀಡುತ್ತಿದ್ದಾರೆ: ಡಾ.ಎಚ್.ಸಿ‌ ಮಹದೇವಪ್ಪ

ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ‌ ಮಹದೇವಪ್ಪ ಹೇಳಿದ್ದಾರೆ.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ರವಿವಾರ ದಸರಾ ಆಚರಣೆ ಯಶಸ್ವಿ ಹಿನ್ನಲೆಯಲ್ಲಿ ಮಾಧ್ಯಮದವರಿಗೆ ಏರ್ಪಡಿಸಿದ್ದ ಉಪಹಾರ ಕೂಟದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆಪರೇಷನ್ ಬಿಜೆಪಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಪ್ರಕ್ರಿಯೆ ನಡೆದರೂ ಯಾವುದೇ ಪ್ರಯೋಜನವಾಗುವುದಿಲ್ಲ. 135 ಸ್ಥಾನ ಗಳಿಸಿರುವ ನಮ್ಮ ಅಸ್ಥಿತ್ವ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಷ ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಹದೇವಪ್ಪ, ಸಂವಿಧಾನದಲ್ಲಿ ಎಲ್ಲಾ ಆಚರಣೆಗಳಿಗೂ ಅವಕಾಶ ಇದೆ. ಸಂವಿಧಾನವನ್ನು ಅರ್ಥ ಮಾಡಿಕೊಂಡಿದ್ದರೆ ಹೀಗೆಲ್ಲಾ ಮಾತನಾಡುತ್ತಿರಲಿಲ್ಲ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಶಾಲಾ, ಕಾಲೇಜು ಮಕ್ಕಳಿಗೆ ಕಡ್ಡಾಯವಾಗಿ ಬೋಧಿಸುವಂತೆ ಸೂಚನೆ ನೀಡಿರುವುದು ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ.‌ ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ತಮ್ಮ ಅಭಿಪ್ರಾಯ ಹೇಳಲು ಕಾನೂನಿನಲ್ಲೇ ಅವಕಾಶ ಇದೆ. ಹಾಗಾಗಿ ಬೆದರಿಕೆ ಕರೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತು ಪೊಲೀಸರು ಕ್ರಮ‌ಜರುಗಿಸಲಿದ್ದಾರೆ ಎಂದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಪಟ್ಟಂತೆ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಆಮಿಷ ಒಡ್ಡಲಾಗಿತ್ತು ಎಂಬುದು ದೃಢಪಟ್ಟಿಲ್ಲ. ಆದರೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

andolanait

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

44 mins ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

48 mins ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

52 mins ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

57 mins ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

1 hour ago