ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯಕ್ಕಲ್ಲ, ಇಡೀ ದೇಶಕ್ಕೆ ಅನಿವಾರ್ಯ ಎಂದು ಶಾಸಕ ಕಂಪ್ಲಿ ಗಣೇಶ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇರುವುದರಿಂದ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ 138 ಕ್ಷೇತ್ರದಲ್ಲಿ ಗೆದ್ದಿದೆ. ಅವರು ಒಂದು ರೀತಿಯ ರೋಲ್ ಮಾಡೆಲ್ ಇದ್ದಂತೆ. ಅವರಿಂದ ಬಳ್ಳಾರಿಯಲ್ಲಿ ನಾವು ಐದಕ್ಕೆ ಐದು ಗೆದ್ದಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿದರೆ ಒಳ್ಳೆಯದು ಎಂದರು.
ಗ್ಯಾರಂಟಿಯಿಂದ ಅನುದಾನದ ಸಿಗುತ್ತಿಲ್ಲ ಎಂಬ ಶಾಸಕರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಜನರಿಗೆ ತುಂಬಾ ಅನುಕೂಲವಾಗಿದೆ. ಜೊತೆಗೆ ಅನುದಾನ ನೀಡುವುದರಲ್ಲೂ ಯಾವುದೇ ಕೊರತೆ ಇಲ್ಲ. ನಮ್ಮ ಕಂಪ್ಲಿ ಕ್ಷೇತ್ರಕ್ಕೆ 500 ಕೋಟಿ ರೂ. ಅನುದಾನ ನೀಡಿದ್ದಾರೆ. ಇದರಿಂದ ನಮ್ಮ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕೆಲಸಗಳಾಗಿವೆ ಎಂದು ತಿಳಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…