Mysore
21
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಸಿದ್ದರಾಮಯ್ಯ ಬೆಂಕಿ ಇದ್ದಂತೆ ಎಂದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಈ ಬಗ್ಗೆ ಚರ್ಚೆ ಮಾಡೋದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಅದನ್ನು ಮುಟ್ಟಿದ್ರೆ ಎಲ್ಲರೂ ಭಸ್ಮವಾಗಿ ಬಿಡುತ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನು ನಮ್ಮ ಪಕ್ಷ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧವಾಗಿದೆ. ಹೈಕಮಾಂಡ್‌ ಬದಲಾವಣೆ ಮಾಡಬೇಕು ಎಂದು ನಿರ್ಧಾರ ಮಾಡಿದ್ರೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಆದ್ರ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

 

Tags:
error: Content is protected !!