ರಾಜ್ಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ ಎಂದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಈ ಬಗ್ಗೆ ಚರ್ಚೆ ಮಾಡೋದು ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟೋಕೆ ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಬೆಂಕಿ ಇದ್ದಂಗೆ, ಅದನ್ನು ಮುಟ್ಟಿದ್ರೆ ಎಲ್ಲರೂ ಭಸ್ಮವಾಗಿ ಬಿಡುತ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನು ನಮ್ಮ ಪಕ್ಷ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧವಾಗಿದೆ. ಹೈಕಮಾಂಡ್‌ ಬದಲಾವಣೆ ಮಾಡಬೇಕು ಎಂದು ನಿರ್ಧಾರ ಮಾಡಿದ್ರೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಆದ್ರ ಹೈಕಮಾಂಡ್‌ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago