ಗದಗ: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಗದಗದಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ ಹಾಗೂ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಸ್ಥಗಿತವಾಗಿದ್ದು, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ನಾವಂತೂ ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ಮಾಡಲ್ಲ. ಸರ್ಕಾರ ಅದಾಗಿಯೇ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನಗರದ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…