ರಾಜ್ಯ

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆ.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅವಕಾಶವಾದಿ ರಾಜಕಾರಣ ಯಾವ ರೀತಿ ಇರುತ್ತದೆ ಎಂಬುದು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಗಜ್ಜಾಹೀರು ಆಗಿದೆ. ಅಹಿಂದ ವರ್ಗದಲ್ಲಿ ಪ್ರಮುಖ ಭಾಗವಾಗಿರುವ ಮುಸ್ಲಿಂ ಜನಾಂಗದ ಮತಗಳಿಂದಲೇ ರಾಜಕೀಯ ಶಕ್ತಿ ಬಳಸಿಕೊಂಡ ಸಿದ್ದರಾಮಯ್ಯನವರು, ಈಗ ನೋಡಿದರೆ ಕಣದಲ್ಲಿರುವ ಯಾವೊಬ್ಬ ಮುಸ್ಲಿಂ ಅಭ್ಯರ್ಥಿಗೂ ಮತ ಹಾಕಬೇಡಿ ಎಂದು ಬಹಿರಂಗವಾಗಿ ಕರೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಎಂದರೆ ಹೀಗೆನಾ ಎಂದು ಖಾರವಾಗಿ ಪ್ರಶ್ನಿಸಿದರು.

ಅಹಿಂದ ವರ್ಗದ ನಾಯಕ ನಾನು, ಅಹಿಂದ ವರ್ಗಕ್ಕೆ ದೊಡ್ಡ ಕೊಡುಗೆ ನೀಡಿದ್ದೇನೆ ಎನ್ನುತ್ತಾರೆ. ಆದರೆ ವಾಲ್ಮೀಕಿ ನಿಗಮದ ಕಥೆ ಏನಾಯ್ತು? ಅಲ್ಲಿ ಲೂಟಿಯಾಗಿದೆ ಎಂಬುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಪ್ರತಿಪಕ್ಷಗಳು ಹೇಳಿದಷ್ಟು ಪ್ರಮಾಣದಲ್ಲಿ ದುಡ್ಡು ಹೊಡೆದಿಲ್ಲ, ಆದರೂ ಸ್ವಲ್ಪ ದುಡ್ಡು ಹೊಡೆದಿದ್ದೇವೆ ಎಂದು ಹೇಳುತ್ತಾರೆ. ದೇವರಾಜ್ ಅರಸು ನಿಗಮದ ಮೂಲಕ ಬಡವರಿಗೆ ನೀಡಲಾಗುವ ಗಂಗಾ ಕಲ್ಯಾಣ ಯೋಜನೆಯನ್ನು ಲೂಟಿ ಆಗಿದೆ. ಒಬ್ಬರು ಇಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ. ಅಂತಹ ಆಯೋಜನೆಯನ್ನು ಕೂಡ ಇವರು ಬಿಟ್ಟಿಲ್ಲ ಎಂದು ಅವರು ಕಿಡಿಕಾರಿದರು.

ಉಪ ಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜೊತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಪಕ್ಷ ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನತೆಯ ಬಗ್ಗೆ ನಮಗೆ ಬದ್ಧತೆ ಇದೆ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಇವರಿಗೆ ಅದು ಯಾವ ರೀತಿಯ ಬದ್ಧತೆ ಇದೆಯೋ ನನಗೆ ಗೊತ್ತಿಲ್ಲ ಎಂದು ಟೀಕಿಸಿದರು ಕೇಂದ್ರ ಸಚಿವರು.

ಮುಖ್ಯಮಂತ್ರಿಗಳು ಉಪ ಚುನಾವಣೆ ಕಣದಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಜನತೆಗೆ ಹೇಳುವುದನ್ನು ಬಿಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಪದ ಬಳಕೆಯನ್ನು ನಾನು ಗಮನಿಸಿದ್ದೇನೆ. ಇದು ಜವಾಬ್ದಾರಿಯುತ ಮುಖ್ಯಮಂತ್ರಿ ಪದವಿಯಲ್ಲಿ ಕೂತಿರುವ ವ್ಯಕ್ತಿಗೆ ಭೂಷಣವಲ್ಲ ಎಂದು ಕುಮಾರಸ್ವಾಮಿಯವರು ಕಟುವಾಗಿ ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago