ರಾಜ್ಯ

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಸಿಎಂ ಸಿದ್ದರಾಮಯ್ಯನವರ ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು. ಸಿಎಂ ಮಾತಿನ ದಾಟಿ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಸದನದಲ್ಲಿ ಚರ್ಚಿಸುವುದಕ್ಕೆ ಔಟ್‌ ಗೋಯಿಂಗ್‌ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾಭಾವನೆ ಇಲ್ಲ ಎಂದು ಹೇಳಿದರು.

ಇದನ್ನು ಓದಿ: ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಾ ಅನ್ನುವುದು ಮುಖ್ಯವಲ್ಲ. ಆ ಸ್ಥಾನದಲ್ಲಿದ್ದು, ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ? ಎಂಬುದು ಮುಖ್ಯ. ಸಿದ್ದರಾಮಯ್ಯನವರ ಕೊನೆಯ ಅಧಿವೇಶನದಲ್ಲಾದರೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು.

ಕಳೆದ ಎರಡೂವರೆ ವರ್ಷಗಳಿಂದ ಏನೂ ಮಾಡದೇ ಇರೋರು ಇನ್ನೆರಡು ವಾರದಲ್ಲಿ ಏನು ಮಾಡ್ತಾರೆ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

1 hour ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago