ಬೆಂಗಳೂರು: ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ ಎಂದು ಬಿಜೆಪಿಕಿಡಿಕಾರಿದೆ.
ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಎಪಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ.
ಯಾರೋ ಕಟ್ಟಿದ ಕೋಟೆಯನ್ನು ತನ್ನದು ಎಂದು ಮೊಂಡುವಾದ ಮಾಡುವುದು ಸಿಎಂ ಸಿದ್ದರಾಮಯ್ಯ ಅವರ ಜಾಯಮಾನ. ಕೇಂದ್ರ ಸರ್ಕಾರ ನೀಡುತ್ತಿದ್ದ ಅಕ್ಕಿಗೆ ತಮ್ಮ ಹೆಸರನ್ನು ಲೇಬಲ್ ಮಾಡಿ, ಅಕ್ಕಿ ಕೊಟ್ಟಿದ್ದು ತಾವು ಎಂದು ಸುಳ್ಳು ಹೇಳಿದ್ದ ಸಿದ್ದರಾಮಯ್ಯ, ಈಗ ಆ ಸುಳ್ಳಿನ ಸರಣಿಯನ್ನು ಮುಂದುವರಿಸಿದ್ದಾರೆ.
ಪಿಎಂ ಆವಾಸ್ ಯೋಜನೆಯಡಿ ಬೆಂಗಳೂರಿನ ಬಡವರಿಗೆ ನಿರ್ಮಿಸಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಸಹ ಈಗ ತಮ್ಮದು ಎಂದು ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಅಂದ ಹಾಗೆ, ಯಾರದೋ ಶ್ರಮದ ಫಲವನ್ನು ತಮ್ಮದು ಎಂದು ಕ್ರೆಡಿಟ್ ತೆಗೆದುಕೊಳ್ಳುವ ಈ ಬುದ್ದಿಯನ್ನು ನೀವು ಕಲಿತಿದ್ದಾದರೂ ಎಲ್ಲಿಂದ ಸಿದ್ದರಾಮಯ್ಯ ಅವರೇ..?? ಉತ್ತರಿಸಿ ಎಂದಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…